ಸಿರವಾರ: ನಮ್ಮ ಸಹಕಾರಿ ಸಂಘ ಉತ್ತಮ ಪ್ರಗತಿ ಸಾಧಿಸಿದ್ದು, 2025-26ನೇ ಸಾಲಿನಲ್ಲಿ ಷೇರುದಾರರಿಗೆ ಶೇ.16ರಷ್ಟು ಲಾಭಾಂಶ ನೀಡಲಾಗುವುದು ಎಂದು ಬಲ್ಲಟಗಿ ಶ್ರೀಗುರು ಶರಣಬಸವ ಪತ್ತಿನ ಸೌಹಾರ್ದ ಸಂಘದ ಅಧ್ಯಕ್ಷ ಎಸ್.ಆರ್. ಶರಬಣ್ಣ ಹೇಳಿದರು.
ತಾಲೂಕಿನ ಬಲ್ಲಟಗಿಯಲ್ಲಿ ಇತ್ತೀಚೆಗೆ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಘವು ಈ ಸಾಲಿನಲ್ಲಿ ₹31.92 ಲಕ್ಷ ಲಾಭ ಗಳಿಸಿದ್ದು, ಒಟ್ಟು ₹57.85 ಕೋಟಿ ವಾರ್ಷಿಕ ವಹಿವಾಟು ನಡೆಸಿದೆ. ಸಾಲ ಪಡೆದ ಸದಸ್ಯರು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದ್ದರಿಂದ ಉತ್ತಮ ವ್ಯವಹಾರ ಸಾಧ್ಯವಾಗಿದೆ ಎಂದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಡಾ. ಟಿ. ಶರಣಪ್ಪ, ನಿರ್ದೇಶಕರಾದ ಕೆ. ಶಿವಪ್ಪಗೌಡ, ಶರಣಬಸಪ್ಪ, ಮಲ್ಲಣ್ಣ ಸಾಹುಕಾರ, ಮುದ್ದಪ್ಪ ಸಾಹುಕಾರ ಸೇರಿದಂತೆ ನಿರ್ದೇಶಕ ಮಂಡಳಿ, ಸಿಬ್ಬಂದಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಮಂತ್ರಾಲಯ: ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಠದಲ್ಲಿ ವಿವಿಧ…
ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…
ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…
ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡ ಶ್ರೀರಾಮುಲು ಏಕವಚನದಲ್ಲಿ ಉಲ್ಲೇಖಿಸುತ್ತಿರುವುದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್…