ರಾಯಚೂರು

ಬಿಜೆಪಿ ಪಾದಯಾತ್ರೆ ರಾಜಕೀಯ ಪ್ರೇರಿತ: ರಝಾಕ್ ಉಸ್ತಾದ್

ರಾಯಚೂರು: ಲಿಂಗಸ್ಗೂರಿನಿಂದ ಬಳ್ಳಾರಿವರೆಗೆ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿದ್ದು, ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜಕೀಯ ಮೈಲೇಜ್ ಪಡೆಯುವ ಉದ್ದೇಶದಿಂದ ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ ರಝಾಕ್ ಉಸ್ತಾದ್ ಆರೋಪಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ₹184 ಕೋಟಿ ಪ್ರಕರಣದಲ್ಲಿ ₹179 ಕೋಟಿ ಹಣ ಪ್ರಕರಣ ದಾಖಲಾಗುವ ಸಂದರ್ಭದಲ್ಲಿಯೇ ಸರ್ಕಾರಕ್ಕೆ ವಾಪಸ್ ಬಂದಿದೆ. ಪ್ರಕರಣ ಸದ್ಯ ತನಿಖೆಯ ಹಂತದಲ್ಲಿದ್ದು, ಯಾರು ತಪ್ಪು ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಲಿದೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಬ್ಯಾಂಕ್ ಕೂಡ ಭಾಗಿಯಾಗಿದ್ದು, ಸಂಬಂಧಪಟ್ಟ ಸಚಿವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಹೀಗಿರುವಾಗ ಬಿಜೆಪಿ ಯಾವ ಪುರುಷಾರ್ಥಕ್ಕಾಗಿ ಪಾದಯಾತ್ರೆ ನಡೆಸುತ್ತಿದೆ ಎಂದು ರಝಾಕ್ ಉಸ್ತಾದ್ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF)ಯಿಂದ ಅನುದಾನ ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿ ಬಿಜೆಪಿ ಹೋರಾಟ ನಡೆಸಲಿ. ಬಿಜೆಪಿ ನಿಜವಾಗಿಯೂ ಜನಪರವಾಗಿದ್ದರೆ ಬರಗಾಲ ಪರಿಹಾರ ವಿತರಣೆಗೆ ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಕಳೆದ ತಿಂಗಳು ಬರಗಾಲ ವೀಕ್ಷಣೆಗೆ ಬಂದಿತ್ತು. ಆ ವರದಿ ಏನಾಯಿತು? ಅಧಿವೇಶನ ನಡೆಯುವ ಸಂದರ್ಭದಲ್ಲಿಯೂ ಹೋರಾಟ ನಡೆಸಿ ಬರಗಾಲದ ವಿಷಯ ಚರ್ಚೆಗೆ ಬಾರದಂತೆ ಮಾಡಿದ್ದೀರಿ. ಬರಗಾಲ ವೀಕ್ಷಣೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಪರಿಹಾರಕ್ಕೆ ಒತ್ತಾಯಿಸುವ ಕೆಲಸ ಮಾಡಬೇಕಿತ್ತು. ಅದನ್ನು ಬಿಟ್ಟು ಪಾದಯಾತ್ರೆ ನಡೆಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರಗಾಲದಿಂದ ತತ್ತರಿಸಿವೆ. ಎಡದಂಡೆ ಕಾಲುವೆಯ ನೀರು ಕೊನೆಯ ಭಾಗದ ರೈತರಿಗೆ ತಲುಪುತ್ತಿಲ್ಲ ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ NDRF ಕಠಿಣ ನಿಯಮಗಳ ಕಾರಣ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬರಗಾಲ ಪಟ್ಟಿಗೆ ಸೇರ್ಪಡೆಯಾಗಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ಇದರೊಂದಿಗೆ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ ಎಂದು ತಿಳಿಸಿದ್ದಾರೆ.

ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಜನಪರವಾಗಿ ಮಾತನಾಡುವುದು ಸೂಕ್ತ. ಜನರು ಸಂಕಷ್ಟದಲ್ಲಿರುವಾಗ ರಾಜಕೀಯ ಮೈಲೇಜ್ ಪಡೆಯಲು ನಡೆಸುವ ಪಾದಯಾತ್ರೆ ಫಲ ನೀಡುವುದಿಲ್ಲ. ಬಿಜೆಪಿ ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ರಝಾಕ್ ಉಸ್ತಾದ್ ಅಭಿಪ್ರಾಯಪಟ್ಟಿದ್ದಾರೆ.

projectededore

Recent Posts

ಇಂದಿರಾ ನಗರ ಜ್ಞಾನ ವಿಕಾಸ ಕೇಂದ್ರದಲ್ಲಿ ‘ಹೊಸ ರುಚಿ’ ಪ್ರಾತ್ಯಕ್ಷಿಕೆ

ಸಿರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪಟ್ಟಣದ ಇಂದಿರಾ ನಗರದ 'ರಂಗಶಿವ' ಜ್ಞಾನ…

12 minutes ago

ಕಿಚ್ಚ ಸುದೀಪ ಜನ್ಮದಿನ; ಅಭಿಮಾನಿಗಳಿಂದ ಆಶ್ರಮಕ್ಕೆ ದಿನಸಿ ಧಾನ್ಯ ವಿತರಣೆ

ಸಿರವಾರ: ಚಿತ್ರನಟ ಕಿಚ್ಚ ಸುದೀಪ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಿರವಾರದ ಸುದೀಪ್ ಅಭಿಮಾನಿ ಯುವ ಬಳಗ ಮಾದರಿಯಾಗಿದೆ.…

1 hour ago

ಚಾಗಬಾವಿ ಗ್ರಾಮದಲ್ಲಿ ಜಾಬ್‌ ಕಾರ್ಡ್‌ ಮೇಳ: 55 ಹೊಸ ಅರ್ಜಿಗಳ ಸ್ವೀಕಾರ

ಸಿರವಾರ: ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಚಾಗಬಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ…

4 hours ago

ಕೆಪಿಎಸ್‌ಸಿ ಹಗರಣಗಳ ಮೂಲ ಬಿಜೆಪಿ–ಜೆಡಿಎಸ್ ಆಡಳಿತದಲ್ಲೇ: ಡಿಕೆ ಶಿವಕುಮಾರ್ ಆರೋಪ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಕ್ಕೆ ಸಂಬಂಧಿಸಿದ ಹಗರಣಗಳ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ತೆರೆ

ವೈಭವದ ಸರ್ವಸಮರ್ಪಣೋತ್ಸವ, ಮರದ ರಥದಲ್ಲಿ ವಾಹನಗಳ ಮೆರವಣಿಗೆ ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು ಗುರುವಾರ ವೈಭವದಿಂದ…

9 hours ago

ಬೆಳಗಾವಿ ಗಡಿ ವಿವಾದ ಮತ್ತೆ ಕಾವಿಗೆ: ಮಹಾರಾಷ್ಟ್ರದ ಅರ್ಜಿ ವಿಚಾರಣೆಗೆ ಒತ್ತಾಯ, ಕರ್ನಾಟಕದಿಂದ ಪಾಲಿಕೆಗೆ ಖಡಕ್ ಸೂಚನೆ

ನವದೆಹಲಿ: ಕರ್ನಾಟಕ–ಮಹಾರಾಷ್ಟ್ರ ನಡುವಿನ ದೀರ್ಘಕಾಲದ ಬೆಳಗಾವಿ ಗಡಿ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ (ಕರ್ನಾಟಕ ಸುದ್ದಿ)ದಲ್ಲಿರುವ ಮರಾಠಿ ಭಾಷಿಕ…

10 hours ago