ರಾಯಚೂರು

ರಾಯಚೂರಿನ 3 ತಾಲೂಕು ಬರಪೀಡಿತ ಪಟ್ಟಿಗೆ: ಸಿಂಧನೂರು, ಸಿರವಾರ ತೀವ್ರ ಬರ ಅರ್ಹ, ಮಾನ್ವಿ ಸಾಧಾರಣ

ಸಿರವಾರ: ಮುಂಗಾರು ಮಳೆ ಕೊರತೆಯಿಂದ ತತ್ತರಿಸಿರುವ ರಾಯಚೂರು ಜಿಲ್ಲೆಯ ಮೂರು ತಾಲೂಕುಗಳು ಸರ್ಕಾರದ ಬರ ಪರಿಶೀಲನಾ ಪಟ್ಟಿಗೆ ಸೇರಿವೆ.

ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗ ಹೊರಡಿಸಿರುವ ಅಧಿಸೂಚನೆಯಂತೆ ಸಿಂಧನೂರು ಮತ್ತು ಸಿರವಾರ ತಾಲೂಕುಗಳನ್ನು ತೀವ್ರ ಬರ ಹಾಗೂ ಮಾನ್ವಿ ತಾಲೂಕನ್ನು ಸಾಧಾರಣ ಬರ ಪರಿಸ್ಥಿತಿಯ ಗ್ರೌಂಡ್ ಟ್ರೂಥಿಂಗ್ ಪರಿಶೀಲನೆಗೆ ಆಯ್ಕೆ ಮಾಡಲಾಗಿದೆ.

ಸೆ. 8ರಿಂದ ಕ್ಷೇತ್ರ ಪರಿಶೀಲನೆ:
ಸೆ.5 ರಿಂದ 7ರವರೆಗೆ ತಂಡ ರಚನೆ ಹಾಗೂ ಗ್ರಾಮಗಳ ಆಯ್ಕೆ ನಡೆಯಲಿದ್ದು, ಸೆ.8 ರಿಂದ 10ರವರೆಗೆ ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡಿ ಬೆಳೆ ನಷ್ಟದ ವಾಸ್ತವ ಪರಿಶೀಲನೆ ನಡೆಸಲಿದ್ದಾರೆ. ವರದಿಯನ್ನು ಸೆ.11ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು.

‘ಕ್ರಾಪ್ ಲಾಸ್ ಜಿಟಿ’ ಮೊಬೈಲ್ ಆ್ಯಪ್ ಮೂಲಕ ಜಿಯೋ-ಟ್ಯಾಗ್ ಫೋಟೋ, ಜಿಪಿಎಸ್ ಮಾಹಿತಿಯೊಂದಿಗೆ ಹಾನಿಯನ್ನು ದಾಖಲಿಸಲಾಗುವುದು.

ಬರ ನಿರ್ವಹಣಾ ಕೈಪಿಡಿ 2020ರಂತೆ ಶೇ.33ಕ್ಕಿಂತ ಹೆಚ್ಚು ನಷ್ಟ ದೃಢಪಟ್ಟರೆ ಬರ ಘೋಷಣೆಗೆ ಅರ್ಹವಾಗಲಿದ್ದು, ಶೇ.50ಕ್ಕಿಂತ ಹೆಚ್ಚಿದ್ದರೆ ತೀವ್ರ ಬರ ಎಂದು ಪರಿಗಣಿಸಲಾಗುತ್ತದೆ.

projectededore

Recent Posts

ರಾಯಚೂರಿನಲ್ಲಿ ಸಾರಥಿ ಫೈನಾನ್ಸ್ ನೂತನ ಶಾಖೆ ಆರಂಭ: ಕರ್ನಾಟಕದಲ್ಲಿ 20ನೇ ಶಾಖೆ

ರಾಯಚೂರು: ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಸಾಲ ವಿತರಣೆಯಲ್ಲಿ ಗಮನಹರಿಸಿರುವ ಬ್ಯಾಂಕೇತರ ಹಣಕಾಸು ಸಂಸ್ಥೆ (ಎನ್‌ಬಿಎಫ್‌ಸಿ) ಸಾರಥಿ…

35 minutes ago

ಮಂತ್ರಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ: ಅದ್ಧೂರಿಯಾಗಿ ನಡೆದ ಪಿಂಡ್ಲಿ ಉತ್ಸವ

ಮಂತ್ರಾಲಯ: ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಠದಲ್ಲಿ ವಿವಿಧ…

4 hours ago

ತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…

10 hours ago

ಬಳ್ಳಾರಿ ಚಲೋ ತೋರ್ಪಡಿಕೆಗಾಗಿ ನಡೆಸಿದ ಪಾದಯಾತ್ರೆ: ಎನ್‌.ಎಸ್‌.ಬೋಸರಾಜು ಟೀಕೆ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…

10 hours ago

ಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ

​ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…

10 hours ago

ಸಿರವಾರ ಬಿಜೆಪಿ ಮುಖಂಡರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಬೆಂಬಲ: ಸಿಂಧನೂರಿನಿಂದ ಕಾರಟಗಿಯತ್ತ ಸಾಗಿದ ಬೃಹತ್ ಜಾಥಾ

ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…

11 hours ago