ರಾಯಚೂರು

ನಿಸ್ವಾರ್ಥ ಸೇವೆಗೆ ನಮನ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಆದಿಲಕ್ಷ್ಮಿಗೆ ಅಭಿನಂದನೆ

ರಾಯಚೂರು: ನಗರದ ವಾರ್ಡ್‌-16ರ ಜಿ.ಟಿ. ತೋಟ 2ನೇ ಕೇಂದ್ರದ ಅಂಗನವಾಡಿ ಕಾರ್ಯಕರ್ತೆಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಆದಿಲಕ್ಷ್ಮಿ ಅವರಿಗೆ ಅಂಗನವಾಡಿ ಕೇಂದ್ರದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿಶು ಅಭಿವೃದ್ಧಿ ಮೇಲ್ವಿಚಾರಕಿ ಬಸಮ್ಮ, ಅಂಗನವಾಡಿ ಕಾರ್ಯಕರ್ತೆಯರ ಸೇವೆ ಸಮಾಜದ ಅಭಿವೃದ್ಧಿಯಲ್ಲಿ ಅತ್ಯಂತ ಅಮೂಲ್ಯವಾದದ್ದು. ಮಕ್ಕಳ ಆರೋಗ್ಯ, ಪೌಷ್ಟಿಕತೆ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಆದಿಲಕ್ಷ್ಮಿ ಅವರು ಮಕ್ಕಳ ಹಾಗೂ ಕುಟುಂಬಗಳ ಅಭಿವೃದ್ಧಿಗಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದು, ಅವರ ಕಾರ್ಯ ಎಲ್ಲರಿಗೂ ಆದರ್ಶವಾಗಿದೆ ಎಂದು ಪ್ರಶಂಸಿಸಿದರು.

ಪ್ರಜಾಪ್ರಗತಿ ವರದಿಗಾರ ಮಹ್ಮದ್ ಸಾಧಿಕ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾಗಿದ್ದಾರೆ. ಆದಿಲಕ್ಷ್ಮಿ ಅವರು ತಮ್ಮ ಸೇವಾವಧಿಯಲ್ಲಿ ಸಾವಿರಾರು ಮಕ್ಕಳು ಹಾಗೂ ಕುಟುಂಬಗಳ ವಿಶ್ವಾಸ ಗಳಿಸಿದ್ದು, ಅವರ ನಿಸ್ವಾರ್ಥ ಸೇವೆ ಸದಾ ಸ್ಮರಣೀಯವಾಗಿರುತ್ತದೆ. ಅವರ ನಿವೃತ್ತಿ ಜೀವನ ಸುಖ, ಆರೋಗ್ಯ ಮತ್ತು ನೆಮ್ಮದಿಯಿಂದ ಕೂಡಿರಲಿ ಎಂದು ಹಾರೈಸಿದರು.

ಮಂಗಳವಾರಪೇಟೆ ಅಂಗನವಾಡಿ ಕಾರ್ಯಕರ್ತೆ ಮಹಬೂಬ್ ಬಿ. ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದಿಲಕ್ಷ್ಮಿ ಅವರು ಕರ್ತವ್ಯವನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ, ಸೇವೆಯಾಗಿ ಸ್ವೀಕರಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಇಂತಹ ಸೇವೆಯನ್ನು ಸಮಾಜ ಸದಾ ಗೌರವದಿಂದ ಸ್ಮರಿಸುತ್ತದೆ. ಅವರ ಮುಂದಿನ ಜೀವನ ಸಂತೋಷ, ಆರೋಗ್ಯ ಹಾಗೂ ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಗ್ಮಾ, ನಸೀಮಾ, ಇರ್ಫಾನ್, ಇಂದು, ಈರಮ್ಮ, ಅಂಬಿಕಾ, ಮಲ್ಲಿಕಾರ್ಜುನ್, ಸದ್ದಾಂ ಹುಸೇನ್, ಅಂಗನವಾಡಿ ಕಾರ್ಯಕರ್ತೆ ಕೃಷ್ಣವೇಣಿ, ಮಹಬೂಬ್ ಬಿ., ರಾಧಾ, ಕಿಶೋರಿಯರಾದ ತಬಸುಮ್, ನಜರೇನ್ ಸೇರಿದಂತೆ ಏರಿಯಾದ ಮಕ್ಕಳ ತಾಯಂದಿರು ಹಾಗೂ ಹಲವರು ಉಪಸ್ಥಿತರಿದ್ದರು.

projectededore

Recent Posts

ರಾಯಚೂರಿನ 3 ತಾಲೂಕು ಬರಪೀಡಿತ ಪಟ್ಟಿಗೆ: ಸಿಂಧನೂರು, ಸಿರವಾರ ತೀವ್ರ ಬರ ಅರ್ಹ, ಮಾನ್ವಿ ಸಾಧಾರಣ

ಸಿರವಾರ: ಮುಂಗಾರು ಮಳೆ ಕೊರತೆಯಿಂದ ತತ್ತರಿಸಿರುವ ರಾಯಚೂರು ಜಿಲ್ಲೆಯ ಮೂರು ತಾಲೂಕುಗಳು ಸರ್ಕಾರದ ಬರ ಪರಿಶೀಲನಾ ಪಟ್ಟಿಗೆ ಸೇರಿವೆ. ರಾಜ್ಯ…

37 minutes ago

ಮಂತ್ರಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ: ಅದ್ಧೂರಿಯಾಗಿ ನಡೆದ ಪಿಂಡ್ಲಿ ಉತ್ಸವ

ಮಂತ್ರಾಲಯ: ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಠದಲ್ಲಿ ವಿವಿಧ…

3 hours ago

ತಹಸೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…

9 hours ago

ಬಳ್ಳಾರಿ ಚಲೋ ತೋರ್ಪಡಿಕೆಗಾಗಿ ನಡೆಸಿದ ಪಾದಯಾತ್ರೆ: ಎನ್‌.ಎಸ್‌.ಬೋಸರಾಜು ಟೀಕೆ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…

9 hours ago

ಅತ್ಯಾಚಾರ ಸಂತ್ರಸ್ತೆ ಅಶ್ವಿನಿ ಕುಟುಂಬಕ್ಕೆ ಸಚಿವ ಮುನಿಯಪ್ಪ ಸಾಂತ್ವನ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಭರವಸೆ

​ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…

9 hours ago

ಸಿರವಾರ ಬಿಜೆಪಿ ಮುಖಂಡರಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಬೆಂಬಲ: ಸಿಂಧನೂರಿನಿಂದ ಕಾರಟಗಿಯತ್ತ ಸಾಗಿದ ಬೃಹತ್ ಜಾಥಾ

ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…

10 hours ago