ರಾಯಚೂರು: ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್ಎಂಇ) ಸಾಲ ವಿತರಣೆಯಲ್ಲಿ ಗಮನಹರಿಸಿರುವ ಬ್ಯಾಂಕೇತರ ಹಣಕಾಸು ಸಂಸ್ಥೆ (ಎನ್ಬಿಎಫ್ಸಿ) ಸಾರಥಿ ಫೈನಾನ್ಸ್ ರಾಯಚೂರಿನಲ್ಲಿ ನೂತನ ಶಾಖೆಯನ್ನು ಆರಂಭಿಸಿದೆ. ಇದರೊಂದಿಗೆ ಕರ್ನಾಟಕದಲ್ಲಿ ಸಂಸ್ಥೆಯ ಶಾಖೆಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಸ್ಥಳೀಯ ಸಣ್ಣ ಉದ್ಯಮಿಗಳು ಹಾಗೂ ವ್ಯಾಪಾರಸ್ಥರಿಗೆ ಸಾಂಸ್ಥಿಕ ಹಣಕಾಸು ನೆರವು ಒದಗಿಸುವ ಉದ್ದೇಶದಿಂದ ರಾಯಚೂರಿನಲ್ಲಿ ಶಾಖೆ ಆರಂಭಿಸಲಾಗಿದೆ. ಜಿಲ್ಲೆಯ ಎಂಎಸ್ಎಂಇ ವಲಯಕ್ಕೆ ಸುಲಭವಾಗಿ ಸಾಲ ಸೌಲಭ್ಯ ಲಭ್ಯವಾಗುವಂತೆ ಮಾಡುವ ಮೂಲಕ ಉದ್ಯಮಗಳ ಬೆಳವಣಿಗೆಗೆ ನೆರವಾಗುವುದು ಸಂಸ್ಥೆಯ ಉದ್ದೇಶವಾಗಿದೆ.
ರಾಯಚೂರಿನ ಗೋಶಾಲಾ ರಸ್ತೆ, ಆಟೋ ನಗರ, 12-7-132/9, ಮೊದಲ ಮಹಡಿ, ರಾಯಚೂರು–584101 ವಿಳಾಸದಲ್ಲಿ ನೂತನ ಶಾಖೆ ಕಾರ್ಯಾರಂಭ ಮಾಡಿದೆ.
2025ರ ಏಪ್ರಿಲ್ನಲ್ಲಿ ಕಾರ್ಯಾಚರಣೆ ಆರಂಭಿಸಿರುವ ಸಾರಥಿ ಫೈನಾನ್ಸ್, ಸಣ್ಣ ವ್ಯಾಪಾರಸ್ಥರು ಮತ್ತು ಉದ್ಯಮಿಗಳಿಗೆ ಸಾಂಸ್ಥಿಕ ಸಾಲ ಸೌಲಭ್ಯವನ್ನು ಸುಲಭವಾಗಿ ಒದಗಿಸುವತ್ತ ಗಮನಹರಿಸಿದೆ. ಸಂಸ್ಥೆಯು ₹5 ಲಕ್ಷದಿಂದ ₹35 ಲಕ್ಷದವರೆಗೆ ಆಸ್ತಿ ಮೇಲಾಧಾರಿತ ಸಾಲ ಸೌಲಭ್ಯಗಳನ್ನು ನೀಡುತ್ತಿದೆ.
ಈ ಸಾಲ ಸೌಲಭ್ಯವನ್ನು ವ್ಯಾಪಾರ ವಿಸ್ತರಣೆ, ದುಡಿಯುವ ಬಂಡವಾಳದ ಅಗತ್ಯ ಹಾಗೂ ಇತರ ಉದ್ಯಮ ಸಂಬಂಧಿತ ಉದ್ದೇಶಗಳಿಗೆ ಬಳಸಿಕೊಳ್ಳಬಹುದಾಗಿದೆ.
ಸಂಸ್ಥೆಯ ಪ್ರಕಾರ, ಸಾರಥಿ ಫೈನಾನ್ಸ್ ಈಗಾಗಲೇ ₹650 ಕೋಟಿಗೂ ಅಧಿಕ ನಿರ್ವಹಣಾ ಆಸ್ತಿ (AUM) ಹೊಂದಿದ್ದು, ಸಣ್ಣ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಂಸ್ಥಿಕ ಸಾಲಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಶಾಖಾ ಜಾಲವನ್ನು ವಿಸ್ತರಿಸುತ್ತಿದೆ.
ರಾಷ್ಟ್ರಮಟ್ಟದಲ್ಲಿ ಸಾರಥಿ ಫೈನಾನ್ಸ್ ಆರು ರಾಜ್ಯಗಳಲ್ಲಿ 100ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಎಂಎಸ್ಎಂಇ ವಲಯಕ್ಕೆ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ, ಸಣ್ಣ ವ್ಯಾಪಾರಸ್ಥರನ್ನು ಸಾಂಸ್ಥಿಕ ಹಣಕಾಸು ವ್ಯವಸ್ಥೆಯೊಂದಿಗೆ ಸಂಪರ್ಕಿಸುವತ್ತ ಸಂಸ್ಥೆ ಗಮನಹರಿಸಿದೆ.
ಕರ್ನಾಟಕದಲ್ಲಿ ಸಂಸ್ಥೆಯ ವಿಸ್ತರಣೆ ಕುರಿತು ಮಾತನಾಡಿದ ಸಾರಥಿ ಫೈನಾನ್ಸ್ನ ಚೀಫ್ ಬಿಸಿನೆಸ್ ಆಫೀಸರ್ ಇಮ್ರಾನ್ ಹಶ್ಮಿ, ಕರ್ನಾಟಕವು ಸಂಸ್ಥೆಗೆ ಪ್ರಮುಖ ಮಾರುಕಟ್ಟೆಯಾಗಿದ್ದು, ರಾಜ್ಯದಲ್ಲಿ 20 ಶಾಖೆಗಳನ್ನು ಆರಂಭಿಸಿರುವುದು ಸ್ಥಳೀಯ ಎಂಎಸ್ಎಂಇಗಳು ಮತ್ತು ಉದ್ಯಮಿಗಳಿಗೆ ಇನ್ನಷ್ಟು ಹತ್ತಿರವಾಗುವ ಬದ್ಧತೆಯನ್ನು ತೋರಿಸುತ್ತದೆ ಎಂದರು.
ರಾಯಚೂರು ಸಂಸ್ಥೆಯ ಬೆಳವಣಿಗೆಗೆ ಪ್ರಮುಖ ಮಾರುಕಟ್ಟೆಯಾಗಿದ್ದು, ಸ್ಥಳೀಯ ವ್ಯಾಪಾರಸ್ಥರಿಗೆ ತ್ವರಿತ ಹಾಗೂ ಸಕಾಲಿಕ ಸಾಲ ನೆರವು ಒದಗಿಸಲು ನೂತನ ಶಾಖೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಸ್ಥಳೀಯ ಉದ್ಯಮಿಗಳ ಅಗತ್ಯಗಳನ್ನು ಅರ್ಥಮಾಡಿಕೊಂಡು, ಅವರ ವ್ಯವಹಾರ ಬಲಪಡಿಸಲು, ದುಡಿಯುವ ಬಂಡವಾಳದ ಅಗತ್ಯಗಳನ್ನು ಪೂರೈಸಲು ಹಾಗೂ ಉದ್ಯಮದ ಬೆಳವಣಿಗೆಗೆ ಅಗತ್ಯವಿರುವ ಹಣಕಾಸು ಪರಿಹಾರಗಳನ್ನು ಒದಗಿಸುವುದು ಸಂಸ್ಥೆಯ ಆದ್ಯತೆಯಾಗಿದೆ ಎಂದು ಹೇಳಿದರು.
ಸುಸ್ಥಿರ ಬೆಳವಣಿಗೆ, ವಿವೇಕಯುತ ಅಪಾಯ ನಿರ್ವಹಣೆ ಮತ್ತು ತಂತ್ರಜ್ಞಾನ ಆಧಾರಿತ ಸಾಲ ವಿತರಣಾ ವ್ಯವಸ್ಥೆಯ ಅಭಿವೃದ್ಧಿಗೂ ಸಂಸ್ಥೆ ಆದ್ಯತೆ ನೀಡುತ್ತಿದೆ ಎಂದು ಇಮ್ರಾನ್ ಹಶ್ಮಿ ತಿಳಿಸಿದರು.
ಸಿರವಾರ: ಮುಂಗಾರು ಮಳೆ ಕೊರತೆಯಿಂದ ತತ್ತರಿಸಿರುವ ರಾಯಚೂರು ಜಿಲ್ಲೆಯ ಮೂರು ತಾಲೂಕುಗಳು ಸರ್ಕಾರದ ಬರ ಪರಿಶೀಲನಾ ಪಟ್ಟಿಗೆ ಸೇರಿವೆ. ರಾಜ್ಯ…
ಮಂತ್ರಾಲಯ: ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮಠದಲ್ಲಿ ವಿವಿಧ…
ಸಿರವಾರ: ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ…
ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ‘ಬಳ್ಳಾರಿ ಚಲೋ’…
ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೆ ಬಲಿಯಾದ ಅಶ್ವಿನಿ ಅವರ ನಿವಾಸಕ್ಕೆ ಸಮಾಜ ಕಲ್ಯಾಣ…
ಸಿರವಾರ: ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರ, ಸಚಿವರ ಹಗರಣಗಳು ಹಾಗೂ ಬರಪೀಡಿತ ತಾಲೂಕುಗಳಿಗೆ ಪರಿಹಾರ ವಿತರಿಸುವಲ್ಲಿ ಅನುಸರಿಸುತ್ತಿರುವ ವಿಳಂಬ…